ತಾವರಗೇರಾ: ಪಟ್ಟಣದ ಖಾಸಗಿ ಆಸ್ಪತ್ರೆಗಳ ಮೇಲೆ ತಹಶೀಲ್ದಾರರ ದಾಳಿ..!

N Shameed
1 Min Read

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ …………………………………………………

ವರದಿ ಎನ್ ಶಾಮೀದ್ ತಾವರಗೇರಾ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಕೊವೀಡ್ ನಿಯಮ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಕುಷ್ಟಗಿ ತಹಶಿಲ್ದಾರರಾದ ಎಂ ಸಿದ್ದೇಶ ಸೇರಿದಂತೆ ತ್ರಿ ಸದಸ್ಯರ ತಂಡ ತಾವರಗೇರಾ ಪಟ್ಟಣದ ಮೂರು ಖಾಸಗಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ ಘಟನೆ ಜರುಗಿದೆ.
ಕೊವೀಡ್ ನಿಯಮ ಉಲ್ಲಂಘನೆ ಹಿನ್ನಲೆಯಲ್ಲಿ ತಾಲೂಕ ಆರೋಗ್ಯ ಅಧಿಕಾರಿ ಡಾ|| ಆನಂದ ಗೋಟೂರ್, ತಾಪಂ ಸಹಾಯಕ ನಿರ್ದೇಶಕ ವೆಂಕಟೇಶ ವಂದಾಲ್, ಆರ್ ಐ ಶರಣಪ್ಪ ದಾಸರ ನೇತೃತ್ವದ ತಂಡ ದಾಳಿ ನಡೆಸಿ ಖಾಸಗಿ ಆಸ್ಪತ್ರೆಗಳನ್ನು ಸೀಜ್ ಮಾಡಲಾಗಿದೆ.

ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿ ಸೂರ್ಯಕಾಂತ ಮಸ್ಕಿ, ಪಪಂ ಸಿಬ್ಬಂದಿ ಶಾಮೂರ್ತಿ ಕಟ್ಟಿಮನಿ ಉಪಸ್ಥಿತರಿದ್ದರು.
ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಮುಂದಿನ ತನಿಖೆ ಕೈಗೊಳ್ಳಲಾಗುವದು ಎಂದು ಎಎಸ್ಐ ಮಲ್ಲಪ್ಪ ವಜ್ರದ ತಿಳಿಸಿದ್ದಾರೆ.

Share this Article
error: Content is protected !!