ಕೊಪ್ಪಳ ಕ್ಕೆ ನೂತನ ಎಸ್ ಪಿ ಆಗಿ ಅರುಣಾಂಗುಶು ಗಿರಿ..!

N Shameed
1 Min Read

ವರದಿ ಎನ್ ಶಾಮೀದ್ ತಾವರಗೇರಾ

ಕೊಪ್ಪಳ: ಹಿರಿಯ ಐಪಿಎಸ್ ಅಧಿಕಾರಿ ರವಿ‌ ಡಿ ಚೆನ್ನಣ್ಣನವರ ಸೇರಿದಂತೆ 9 ಜನ ಐಪಿಎಸ್ ಅಧಿಕಾರಿ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅದರಂತೆ ಕೊಪ್ಪಳ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಟಿ ಶ್ರೀಧರ್ ಅವರನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದ್ದು ಅಧೀಕ್ಷಕರು ನಾಗರಿಕರ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ (DCRE) ನಿಯೋಜಿಸಲಾಗಿದೆ.
ಅದರಂತೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅರುಣಾಂಗುಶು ಗಿರಿ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಮೈಸೂರಿನ ಎಸ್ ಪಿ ಆಗಿ ಕಾರ್ಯನಿರ್ವಹಿಸಿದ್ದ ಅರಣಾಂಗುಶು ಅವರು ನೂತನ ಎಸ್ ಪಿ ಆಗಿ ಜಿಲ್ಲೆಯ ಜನರ ಮೆಚ್ಚುಗೆಗೆ ಪಾತ್ರರಾಗಬೇಕೆಂಬುದು ಜಿಲ್ಲೆಯ ಜನರ ಆಶಯ ವಾಗಿದೆ.

Share this Article
error: Content is protected !!