ತಾವರಗೇರಾ: ಧರಣಿ ಸ್ಥಳಕ್ಕೆ ಆಗಮಿಸದ ಅಧಿಕಾರಿಗಳ ವಿರುದ್ದ ಆಕ್ರೋಶ..!

N Shameed
1 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ರಕ್ಷಣಾ ಸಮಿತಿಯವರು ನಡೆಸುತ್ತಿರುವ ಸರಣಿ ಉಪವಾಸ ಸತ್ಯಾಗ್ರಹದ ಸ್ಥಳಕ್ಕೆ ಪೊಲೀಸರು ಹಾಗೂ ಆರೊಗ್ಯ ಇಲಾಖೆಯವರು ನೆಪ ಮಾತ್ರಕ್ಕೆ ಎಂಬಂತೆ ಬಂದು ಹೋಗುತ್ತಿದ್ದಾರೇ ಎಂದು ಧರಣಿ ನಿರತರು ಆರೋಪಿಸಿದ್ದಾರೆ. ಈ ಕುರಿತಂತೆ ಹೇಳಿಕೆ ನೀಡಿರುವ ಅವರು ಸೂಕ್ತ ಬಂದೋಬಸ್ತ್ ಮನವಿ ಸಲ್ಲಿಸಿದರೂ, ಕೂಡ ಪೊಲೀಸರು ಸ್ಪಂದನೆ ನೀಡುತ್ತಿಲ್ಲ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಶಾಂತಿಯುತವಾಗಿ ಧರಣಿ‌ನಡೆಸುತ್ತಿದ್ದರೂ ಪೊಲೀಸ್ ರು ಹಾಗೂ ಆರೋಗ್ಯ ಇಲಾಖೆಯವರು ನಮ್ಮನ್ನು ಲಘುವಾಗಿ ಪರಿಗಣಿಸುತ್ತಿದ್ದಾರೆಂದು ಆರೋಪಿಸಿದರು. ಇನ್ನು ಮುಂದಾದರೂ ಎಚ್ಚೆತ್ತುಕೊಂಡು ನಮ್ಮ ಮನವಿಗೆ ಸ್ಪಂದಿಸಬೇಕೆಂದು ಆಗ್ರಹಿಸಿದ್ದಾರೆ.

 

Share this Article
error: Content is protected !!