ತಾವರಗೇರಾ: ಸೌಹಾರ್ದತೆಗೆ ಸಾಕ್ಷಿಯಾದ ಶಿವಾಜಿ ಜಯಂತಿ..!

N Shameed
1 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣದಲ್ಲಿ ಶಿವಾಜಿ ಬಳಗದ ವತಿಯಿಂದ ನಡೆದ ಶಿವಾಜಿ ಭಾವಚಿತ್ರ ಮೆರವಣಿಗೆ ಯಲ್ಲಿ ಪಾಲ್ಗೊಂಡಿದ್ದವರಿಗೆ ಸ್ಥಳೀಯ ಮುಸ್ಲಿಂ ಬಾಂಧವರಿಂದ ತಂಪು ಪಾನೀಯಗಳ (ಶರಬತ್) ನೀಡುವ ಮೂಲಕ ಸೌಹಾರ್ದತೆ ಮೆರೆದಿರುವುದು ಎಲ್ಲರ ಗಮನ ಸೆಳೆಯಿತು.
ಮೊದಲಿಗೆ ಇಲ್ಲಿಯ ಶ್ರೀ ರಾಮ ಮಂದಿರದಲ್ಲಿ ಶಿವಾಜಿಯ ಭಾವಚಿತ್ರ ಮೆರವಣಿಗೆಗೆ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್‌ ಹಾಗೂ ಮಾಜಿ ಜಿಪಂ ಸದಸ್ಯ ಕೆ.ಮಹೇಶ ಚಾಲನೆ ನೀಡಿದರು.

ನಂತರ ಪ್ರಮುಖ ವೃತ್ತದಲ್ಲಿ ಮೆರವಣಿಗೆ ನಡೆದು ಸ್ಥಳೀಯ ವೆಂಕಟೇಶ್ವರ ದೇವಸ್ಥಾನದ ಹತ್ತಿರ ಬರುತ್ತಿದ್ದಂತೆ ಮುಸ್ಲಿಂ ಬಾಂಧವರು ಶಿವಾಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಂತರ, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಶರಬತ್ ನೀಡಿರುವುದು, ಸಾರ್ವಜನಿಕರ ಪ್ರಶಂಸೆ ಗೆ ಕಾರಣವಾಯಿತು.
ಒಟ್ಟಿನಲ್ಲಿ ಸ್ಥಳೀಯ ವಾಗಿ ಹಿಂದು ಮುಸ್ಲಿಂ ಬಾಂಧವರು ಸೌಹಾರ್ದತೆಗೆ ಸಾಕ್ಷಿಯಾಯಿತು.

Share this Article
error: Content is protected !!