ರಸ್ತೆ ಅಪಘಾತ ತಂದೆ- ಮಗಳು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ..!

N Shameed
1 Min Read

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ: ರಾಷ್ಟ್ರೀಯ ಹೆದ್ದಾರಿ ಯ ವಣಗೇರಾ ಸೇತುವೆಯ ಹತ್ತಿರ ಬೈಕ್ ವೊಂದು ರಸ್ತೆ ಬದೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸ್ಥಳದಲ್ಲೇ ಮೃತ ಪಟ್ಟಿದ್ದು, ಉಳಿದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ.

ಮೃತರನ್ನು ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ತೊಂಡಿಹಾಳ ಗ್ರಾಮದ ಬಸಯ್ಯ ಹಿರೇಮಠ (29) ಹಾಗೂ 5 ವರ್ಷದ ಮಗಳು ಅಕ್ಷರಾ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ ಪತ್ನಿ ಶಾಂತಮ್ಮ ಹಾಗೂ 3 ವರ್ಷದ ಶ್ರೀಶೈಲ ಗಂಭೀರವಾಗಿ ಗಾಯಗೊಂಡಿದ್ದು, ಕುಷ್ಟಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೃತ ದುರ್ದೈವಿ ಬಸಯ್ಯ ತಮ್ಮ ಸಂಬಂಧಿಯಾದ ಕುಷ್ಟಗಿಯ ಶರಣಯ್ಯ ಹಿರೇಮನ್ನಾಪುರ ಅವರ ಮನೆಗೆ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಬಂದಿದ್ದರು ಎನ್ನಲಾಗಿದೆ, ಬೈಕ್ ನಲ್ಲಿ ಸ್ವಗ್ರಾಮ ತೊಂಡಿಹಾಳ ಗ್ರಾಮಕ್ಕೆ ವಾಪಾಸ ತೆರಳುತ್ತಿದ್ದಾಗ ಬೈಕ ಸವಾರ ನಿಯಂತ್ರಣ ತಪ್ಪಿ, ತಡೇಗೊಡೆಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಸಿಪಿಐ ನಿಂಗಪ್ಪ ರುದ್ರಪ್ಪ ಗೋಳ ಹಾಗೂ ಪಿಎಸ್ಐ ತಿಮ್ಮಣ್ಣ ನಾಯಕ ಭೇಟಿ ನೀಡಿ ಪರಿಶೀಲಿಸಿದರು.

Share this Article
error: Content is protected !!