ವರದಿ ಎನ್ ಶಾಮೀದ್ ತಾವರಗೇರಾ
ಕೊಪ್ಪಳ:– ದಕ್ಷ ಅಧಿಕಾರಿ ಹಾಗೂ ನಗರ ಠಾಣೆಯ ಸಿಪಿಐ ಆಗಿ ಕಾರ್ಯನಿರ್ವಹಿಸಿ ಇತ್ತೀಚೆಗಷ್ಟೇ ವಿಜಯಪುರ ಜಿಲ್ಲೆಯ ಸಿಂಧಗಿ ಗೆ ವರ್ಗಾವಣೆ ಗೊಂಡಿದ್ದ ಜನಸ್ನೇಹಿ ಸಿಪಿಐ ರವಿ ಉಕ್ಕುಂದ (43) ಹಾಗೂ ಅವರ ಪತ್ನಿ ಮಧು (40) ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಘಟನೆ ಜರುಗಿದ್ದು ಮೃತ ದುರ್ದೈವಿ ಗಳು ಸ್ಥಳದಲ್ಲೇ ಮೃತ ಪಟ್ಟಿದ್ದು ಅವರ ಕುಟುಂಬ ವರ್ಗ ಹಾಗೂ ಪೊಲೀಸ್ ಇಲಾಖೆಗೆ ಬರ ಸಿಡಿಲು ಬಡಿದಂತಾಗಿದೆ, ಅದರಲ್ಲೂ ಕೊಪ್ಪಳ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದ ರವಿ ಉಕ್ಕುಂದ ಅವರಿಗೆ ಪೊಲೀಸ್ ಇಲಾಖೆ ಸೇರಿದಂತೆ ಕೊಪ್ಪಳ ಜಿಲ್ಲೆಯ ಜನತೆ ಸಂತಾಪ ವ್ಯಕ್ತಪಡಿಸಿದೆ.