ಇದೇ ನನ್ನ ಕೊನೆಯ ಚುನಾವಣೆ,; ಬಯ್ಯಾಪೂರ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ: ಈ ವಿಧಾನಸಭೆ ಚುನಾವಣೆ ನನ್ನ ರಾಜಕೀಯ ಜೀವನದ ಕೊನೆಯ ಚುನಾವಣೆ ಆಗಲಿದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು.

ಅವರು ಭಾನುವಾರದಂದು ಕ್ಷೇತ್ರದ ಜುಮಲಾಪೂರ ಹಾಗೂ ಕಿಲ್ಲಾರಹಟ್ಟಿ ವ್ಯಾಪ್ತಿ ಗ್ರಾಮಗಳಲ್ಲಿ ಮತಯಾಚನೆ ಸಂದರ್ಭಗಳಲ್ಲಿ ಹೇಳಿದರು, ಈಗಾಗಲೇ ಕುಷ್ಟಗಿ ಕ್ಷೇತ್ರದ ಜನತೆ ನನ್ನನ್ನು ಎರಡು ಬಾರಿ ಶಾಸಕನಾಗಿ ಆಯ್ಕೆಮಾಡಿದ್ದು,  ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ನಡೆದಿದ್ದು , ಇನ್ನುಳಿದ ಸಂಪೂರ್ಣ ಕ್ಷೇತ್ರದ ಅಭಿವೃದ್ಧಿಯ ಹಿತದೃಷ್ಟಿಯಿಂದ ಈ ಬಾರಿ ಮತ್ತೊಮ್ಮೆ ಆಯ್ಕೆ ಮಾಡಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Share this Article
error: Content is protected !!