ತಾವರಗೇರಾ:- ಬಸ್-ಬೈಕ್ ನಡುವೆ ಅಪಘಾತ ಸ್ಥಳದಲ್ಲೇ ವ್ಯಕ್ತಿ ಸಾವು..!

N Shameed
1 Min Read

 

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಠಾಣಾ ವ್ಯಾಪ್ತಿಯ ಹಿರೇಮುಕರ್ತನಾಳ ಗ್ರಾಮದ ಬಳಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತವಾಗಿದ್ದು, ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.!

ಮೃತ ದುರ್ದೈವಿ ಹಿರೆಮುಕರ್ತನಾಳ ಗ್ರಾಮದ ನಾಗರಾಜ ತಂದೆ ಕಂಬಣ್ಣ ಹಿರೆಮನ್ನಾಪುರ (25) ಎಂದು ಗುರುತಿಸಲಾಗಿದೆ.
ಠಾಣಾ ವ್ಯಾಪ್ತಿಯ ಹಿರೇಮುಖರ್ತನಾಳ ಗ್ರಾಮದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ.
ತಾವರಗೇರಾದಿಂದ ರಾಂಪುರ ಕ್ಕೆ ಹೊರಟಿದ್ದ ಸರ್ಕಾರಿ ಬಸ್ ಹಾಗೂ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಾಲಕನ ತಲೆಗೆ ಬಲವಾದ ಪೆಟ್ಟುಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ತಾವರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Article
error: Content is protected !!