ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ:- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಮುಖಂಡರು ಕಾರ್ಯಕ್ರಮಕ್ಕೆ ಚಾಲನೆ ನೀಡುವ ದೃಶ್ಯವನ್ನು ಸ್ಥಳೀಯ ಪಟ್ಟಣ ಪಂಚಾಯತಿಯವರು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಟ್ಟಣದ ನೂರಾರು ಮಹಿಳೆಯರು ನೇರಪ್ರಸಾರದ ವೀಕ್ಷಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ ಎಂದು ಪಪಂ ಮುಖ್ಯಾಧಿಕಾರಿ ನಬಿಸಾಬ್ ಖುದಾನ್ನವರ್ ತಿಳಿಸಿದರು.
Video Player
00:00
00:00
ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಪಟ್ಟಣದ ಮೂರು ಸ್ಥಳಗಳಲ್ಲಿ ಎಲ್ಇಡಿ ಪರದೆ ಮೂಲಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಇದರಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.