ಮಾರಕಾಸ್ತ್ರಗಳಿಂದ ಹಲ್ಲೆ, ಯುವಕನ ಕೊಲೆ..!

N Shameed
1 Min Read

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ:- ತಾಲೂಕಿನ ಜಾಲಿಹಾಳ ಗ್ರಾಮದ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ನಡೆದಿದೆ.

ಕೊಲೆಯಾದ ಯುವಕನನ್ನು ಭಾಗಪ್ಪ ಹನುಮಪ್ಪ ಕ್ಯಾದಿಗುಂಪಿ (28) ಎಂದು ಗುರುತಿಸಲಾಗಿದೆ. ಜಾಲಿಹಾಳ ಗ್ರಾಮದ ಹೊರಹೊಲಯದ ಮುದೇನೂರ ರಸ್ತೆಯ ಪಕ್ಕದಲ್ಲಿ ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದ್ದು ಘಟನೆಯ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಘಟನಾ ಸ್ಥಳಕ್ಕೆ ಡಿವಾಯ್ ಎಸ್ ಪಿ ಸಿದ್ದಲಿಂಗಪ್ಪ ಗೌಡ, ಕುಷ್ಟಗಿ ಸಿಪಿಐ ಯಶವಂತ ಬೀಸನಳ್ಳಿ, ಪಿಎಸ್ಐ ಮುದ್ದುರಂಗ ಸ್ವಾಮಿ ಭೇಟಿ ನೀಡಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.

ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳ ತಂಡದವರು ಕೊಲೆಗಾರರ ಪತ್ತೆಗೆ ಶೋಧ ಆರಂಭಿಸಿದ್ದಾರೆ.

Share this Article
error: Content is protected !!