ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ:- ಪಟ್ಟಣದಲ್ಲಿ ಹಾಲುಮತ ಸಮಾಜದವರಿಂದ ಶ್ರೀ ಕನಕದಾಸ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕನಕದಾಸ ವೃತ್ತದಲ್ಲಿರುವ ಭಕ್ತ ಕನಕದಾಸ ಪ್ರತಿಮೆ ಗೆ ಶಾಸಕ ದೊಡ್ಡನಗೌಡ ಪಾಟೀಲ ಹೂವಿನ ಹಾರ ಹಾಕುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ದೊಡ್ಡಬಸವ ಬಯ್ಯಾಪುರ, ಶೇಖರಗೌಡ ಪೊಲೀಸ್ ಪಾಟೀಲ, ಕೆ. ಮಹೇಶ, ಸೇರಿದಂತೆ ಹಾಲುಮತ ಸಮಾಜದ ಮುಖಂಡರು ಯುವಕರು ಉಪಸ್ಥಿತರಿದ್ದರು.
Video Player
00:00
00:00
ನಂತರ ಪಟ್ಟಣದ ಪ್ರಮುಖ ವೃತ್ತಗಳ ಮೂಲಕ ಮೆರವಣಿಗೆ ಅದ್ದೂರಿಯಾಗಿ ಸಾಗಿತು. ಮಹಿಳೆಯರು ಕುಂಬ ಕಳಸ ದೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು,
ಮೆರವಣಿಗೆಯು ಪಟ್ಟಣದ ವಿವಿಧ ವೃತ್ತಗಳಲ್ಲಿ ಸಂಚರಿಸಿ ಪುನಃ ಕನಕದಾಸ ವೃತ್ತದಲ್ಲಿ ಕೊನೆಗೊಂಡಿತು.