Monday , May 20 2024
Home / Breaking News / ತಾವರಗೇರಾ: ಪಕ್ಷ ಬಯಸಿದರೆ ಚುನಾವಣೆ ಸ್ಪರ್ಧೆ ಗೆ ಸಿದ್ದ, ಚಕ್ರವರ್ತಿ ಸೂಲಿಬೆಲೆ..!

ತಾವರಗೇರಾ: ಪಕ್ಷ ಬಯಸಿದರೆ ಚುನಾವಣೆ ಸ್ಪರ್ಧೆ ಗೆ ಸಿದ್ದ, ಚಕ್ರವರ್ತಿ ಸೂಲಿಬೆಲೆ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಕೇಂದ್ರ ನಾಯಕರು ಬಯಸಿದ್ದಲ್ಲಿ ನಾನು ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ನಮೋ ಬ್ರಿಗೆಡ್ನ ಸಂಸ್ಥಾಪಕರಾದ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಅವರು ಸೋಮವಾರದಂದು ಪಟ್ಟಣದಲ್ಲಿ ನಮೋ ಬ್ರಿಗೇಡ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಜಗತ್ತಿನಲ್ಲಿಯೇ ಐದನೇ ಶ್ರೀಮಂತ ದೇಶ ಮಾಡುವಲ್ಲಿ ನರೇಂದ್ರ ಮೋದಿಯವರು ಶ್ರಮಿಸಿದ್ದು ಮತ್ತೊಮ್ಮೆ ಅಭಿವೃದ್ಧಿ ಹಿತದೃಷ್ಟಿಯಿಂದ ನರೇಂದ್ರ ಮೋದಿಯವರನ್ನ ಮತ್ತೊಮ್ಮೆ ಪ್ರಧಾನಿಯವರನ್ನಾಗಿ ಮಾಡುವ ಮೂಲಕ ಎಲ್ಲರೂ ಕೈ ಜೋಡಿಸಬೇಕಾಗಿದೆ, ಶ್ರಮಿಕ ವರ್ಗದವರಿಗೆ ಜನಧನ ಯೋಜನೆ, ರೈಲ್ವೆ ಕಾಮಗಾರಿ ಹಾಗೂ ಹೆದ್ದಾರಿಗಳನ್ನು ನಿರ್ಮಿಸುವ ಮೂಲಕ, ಮುಂದುವರಿದ ರಾಷ್ಟ್ರಗಳಲ್ಲಿ ಭಾರತವು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದ್ದು ಭಾರತೀಯರಾದ ನಮಗೆ ಹೆಮ್ಮೆ, ದೇಶ ರಕ್ಷಣೆಯ ವಿಷಯದಲ್ಲಿ ಪ್ರಧಾನಿ ಮೋದಿ ಅವರು ಕೈಗೊಂಡ ನಿರ್ಣಯಗಳು ಪ್ರತಿಯೊಬ್ಬರು ಮೆಚ್ಚಬೇಕಾಗಿದೆ, ಕಾಂಗ್ರೆಸ್ಸಿನ ದುರಾಡಳಿತವನ್ನು ಕೊನೆಗೊಳಿಸಿ ದೇಶದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಬಲಿಷ್ಠ ಭಾರತ ನಿರ್ಮಿಸಲು ಎಲ್ಲರೂ ಮುಂದೆ ಬರಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕೊಪ್ಪಳ ಲೋಕಸಭೆ ಬಿಜೆಪಿ ಅಭ್ಯರ್ಥಿ ಡಾಕ್ಟರ್ ಬಸವರಾಜ್ ಸೇರಿದಂತೆ ನಮೋ ಬ್ರಿಗೇಡ್ ನ ಕಾರ್ಯಕರ್ತರು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು, ಕುಷ್ಟಗಿ ಸಿಪಿಐ ಸೇರಿದಂತೆ ಹನುಮಸಾಗರ ಕುಷ್ಟಗಿ ಹಾಗೂ ಸ್ಥಳೀಯ ಠಾಣೆಯ ಠಾಣಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About N Shameed

Check Also

ತಾವರಗೇರಾ:- ಸಿಡಿಲು ಬಡಿದು ಯುವಕ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಿಡಿಲು ಬಡಿದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ಹಿರೇಮುಕರ್ತನಾಳ ಗ್ರಾಮದ ಹೊರ …

error: Content is protected !!