ತಾವರಗೇರಾ:- ಸಿಡಿಲು ಬಡಿದು ಯುವಕ ಸಾವು..!

N Shameed
1 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಸಿಡಿಲು ಬಡಿದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ಹಿರೇಮುಕರ್ತನಾಳ ಗ್ರಾಮದ ಹೊರ ಹೊಲಯದಲ್ಲಿ ನಡೆದಿದೆ.

ಮೃತ ಯುವಕನನ್ನು ಕನಕರಾಯಪ್ಪ ನಾಗಪ್ಪ ಕಾಟಾಪುರ (28) ಎಂದು ಗುರುತಿಸಲಾಗಿದೆ. ಕುರಿ ಕಾಯಲು ತೆರಳಿದ್ದ ಸಂದರ್ಭದಲ್ಲಿ ಶನಿವಾರ ಸಂಜೆ ಬಾರಿ ಸಿಡಿಲು ಹಾಗೂ ಗುಡುಗಿ ನೊಂದಿಗೆ ಮಳೆ ಆರಂಭ ವಾಗುತ್ತಿದಂತೆ , ಮಳೆಯಿಂದ ತಪ್ಪಿಸಿಕೊಳ್ಳಲು ಗಿಡದ ಕೆಳಗೆ ಕುಳುತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಯುವಕನು ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ತೆರಳಿ ಪರಿಶೀಲನೆ ನಡೆಸಿದರು.

ಪರಿಹಾರ ಧನ ಚೆಕ್ ವಿತರಣೆ:- ವಿಷಯ ತಿಳಿಯುತ್ತಿದ್ದಂತೆ ಕುಷ್ಟಗಿ ತಹಶಿಲ್ದಾರರಾದ ರವಿ ಎಸ್ ಅಂಗಡಿ ಯವರು ಮೃತ ಕುಟುಂಬ ವರ್ಗಕ್ಕೆ 5 ಲಕ್ಷರೂ ಪರಿಹಾರ ಧನ ಚೆಕ್ ವಿತರಿಸಿದರು.

Share this Article
error: Content is protected !!